K.R ಸರ್ಕಲ್ ಅಂಡರ್ಪಾಸ್ ಸ್ಥಳ ಪರಿಶೀಲನೆ ನಡೆಸಿದ ಡಿಕೆಶಿ & ಸಚಿವ ರಾಮಲಿಂಗಾರೆಡ್ಡಿ..!

Mon, May 22, 2023

ಬೆಂಗಳೂರು :  ಧಾರಾಕಾರ  ಮಳೆಯಿಂದಾಗಿ ಕೆ.ಆರ್ ಸರ್ಕಲ್ ಅಂಡರ್'ಪಾಸ್ ನ ನೀರಿನಲ್ಲಿ ಸಿಲುಕಿ ಐಟಿ ಉದ್ಯೋಗಿ ಭಾನುರೇಖಾ ಅವರು ಮೃತಪಟ್ಟ ಸುದ್ದಿ ತಿಳಿದು ಉಪ-ಮುಖ್ಯಮಂತ್ರಿ ಡಿ. ಕೆ‌. ಶಿವಕುಮಾರ್ ಮತ್ತು ಸಚಿವ ರಾಮಲಿಂಗಾರೆಡ್ಡಿ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ... 


ಈ ವೇಳೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಸಂಭವನೀಯ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಹಾಗೂ ಸಂಬಂಧಪಟ್ವ ಇಲಾಖೆಗಳ ಅಧಿಕಾರಿಗಳಿಗೆ  ಉಭಯ ಮಂತ್ರಿಗಳು ಸೂಚನೆ ನೀಡಿದ್ದಾರೆ...

Like our news?