ಬೀಗ ಹಾಕಿದ್ದ ಮನೆಗೆ ಕಳ್ಳರ ಕನ್ನ - ಚಿನ್ನಾಭರಣ, ನಗದು ದೋಚಿ ಪರಾರಿ..!

Wed, Jul 17, 2024

ವಿಜಯಪುರ : ಮನೆಯ ಬೀಗ ಮುರಿದು ಮನೆಯಲ್ಲಿದ ನಗದು , ಚಿನ್ನ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ...


ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ಮಹಮದ್ ಹುಸೇನ್ ಎಂಬುವವರ ಮನೆಯ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ‌ ಆಭರಣ ಹಾಗೂ‌ ನಗದು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು , ಕಳ್ಳರ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ...

Like our news?